Ezra - Chapter 8
Holy Bible

1 : ಅರ್ತಷಸ್ತನ ಆಳ್ವಿಕೆಯಲ್ಲಿ ನನ್ನೊಂದಿಗೆ ಬಾಬಿಲೋನಿನಿಂದ ಹೊರಟ ಗೋತ್ರ ಪ್ರಧಾನರ ಮತ್ತು ಅವರ ಸಂತಾನದವರ ವಿವರ ಹೀಗಿದೆ:
2 : ಫೀನೆಹಾಸನ ಸಂತಾನದವರಲ್ಲಿ ಗೇರ್ಷೋಮ್; ಈತಾಮಾರನ ಸಂತಾನದವರಲ್ಲಿ ದಾನಿಯೇಲ್;
3 : ದಾವೀದನ ಸಂತಾನದವರಲ್ಲಿ ಶೆಕನ್ಯನ ಮೊಮ್ಮಗನಾದ ಹಟ್ಟೂಷ್; ಪರೋಷಿನವರಲ್ಲಿ ಜೆಕರ್ಯ ಮತ್ತು ಅವನೊಡನೆ ಅವನ ವಂಶಕ್ಕೆ ಸೇರಿದ 150 ಮಂದಿ ಗಂಡಸರು;
4 : ಪಹತ್ ಮೋವಾಬಿನವರಲ್ಲಿ ಜೆರಹ್ಯನರ ಮಗ ಎಲ್ಯೆ ಹೋವೇನೈಯ ಮತ್ತು ಅವನೊಡನೆ 200 ಮಂದಿ ಗಂಡಸರು;
5 : ಜತ್ತೂವಿನವರಲ್ಲಿ ಯಹಜೀಯೇಲನ ಮಗ ಶೆಕನ್ಯನು ಮತ್ತು ಅವನೊಡನೆ 300 ಮಂದಿ ಗಂಡಸರು;
6 : ಆದೀನನವರಲ್ಲಿ ಯೋನಾತಾನನ ಮಗ ಎಬೆದನು ಮತ್ತು ಅವನೊಡನೆ 50 ಮಂದಿ ಗಂಡಸರು;
7 : ಎಲಾಮಿನವರಲ್ಲಿ ಅತಲ್ಯನ ಮಗ ಯೆಶಾಯನ ಮತ್ತು ಅವನೊಡನೆ 70 ಮಂದಿ ಗಂಡಸರು; 8ಶೆಫಟ್ಯನವರಲ್ಲಿ ಮೀಕಾಯೇಲನ ಮಗ ಜೆಬದ್ಯನು ಮತ್ತು ಅವನೊಡನೆ 10 ಮಂದಿ ಗಂಡಸರು;
8 : ಶೆಫಟ್ಯನವರಲ್ಲಿ ಮೀಕಾಯೇಲನ ಮಗ ಜೆಬದ್ಯನು ಮತ್ತು ಅವನೊಡನೆ 10 ಮಂದಿ ಗಂಡಸರು;
9 : ಯೋವಾಬನವರಲ್ಲಿ ಯೆಹೀಯೇಲನ ಮಗ ಓಬದ್ಯನು ಮತ್ತು ಅವನೊಡನೆ 218 ಮಂದಿ ಗಂಡಸರು;
10 : ಬಾನೀಯವರಲ್ಲಿ ಯೋಸಿಫ್ಯನ ಮಗ ಶೆಲೋಮೀತನು ಮತ್ತು ಅವನೊಡನೆ 160 ಮಂದಿ ಗಂಡಸರು;
11 : ಬೇಬೈಯವರಲ್ಲಿ ಬೇಬೈಯ ಮಗ ಜೆಕರ್ಯನು ಮತ್ತು ಅವನೊಡನೆ 28 ಮಂದಿ ಗಂಡಸರು;
12 : ಅಜ್ಗಾದನವರಲ್ಲಿ ಹಕ್ಕಾಟಾನನ ಮಗ ಯೋಹಾನಾನನು ಮತ್ತು ಅವನೊಡನೆ 110 ಮಂದಿ ಗಂಡಸರು;
13 : ಅದೋನೀಕಾಮಿನವರಲ್ಲಿ P್ಪಡೆಯರಾದ ಎಲೀಫೆಟ್, ಎಟ್ಮೀಯೇಲ್, ಶೆಮಾಯ ಎಂಬ ಹೆಸರುಳ್ಳವರು ಮತ್ತು ಅವರೊಡನೆ 60 ಮಂದಿ ಗಂಡಸರು;
14 : ಬಿಗ್ವೈಯವರಲ್ಲಿ ಜಕ್ಕೂರನ ಮಗ ಊತೈಯ ಮತ್ತು ಅವನೊಡನೆ 70 ಮಂದಿ ಗಂಡಸರು;
15 : ಅಹವಾ ಪ್ರಾಂತ್ಯದ ಕಡೆಗೆ ಹರಿಯುವ ನದಿಯ ಬಳಿಯಲ್ಲಿ ನಾನು ಇವರನ್ನು ಒಂದು ಗೂಡಿಸಿದೆ. ಅಲ್ಲಿ ಮೂರು ದಿನ ಪಾಳೆಯ ಮಾಡಿಕೊಂಡಮೇಲೆ ನನ್ನೊಡನೆ ಜನಸಾಮಾನ್ಯರು ಹಾಗು ಯಾಜಕರು ಬಂದಿದ್ದರಾದರೂ ಲೇವಿಯರಲ್ಲಿ ಯಾರೂ ಬರದೆ ಇದ್ದುದು ಕಂಡುಬಂದಿತು.
16 : ಆದುದರಿಂದ ಮುಖ್ಯಸ್ಥರಾದ ಎಲೀಯೇಜೆರ್, ಅರೀಯೇಲ್, ಶೆಮಾಯ, ಎಲ್ನಾತಾನ್, ಯಾರೀಬ್, ಎಲ್ನಾತಾನ್, ನಾತಾನ್, ಜೆಕರ್ಯ, ಮೆಷುಲ್ಲಾಮ್ ಇವರನ್ನೂ
17 : ಪಂಡಿತರಾದ ಯೋಯಾರೀಬ್, ಎಲ್ನಾತಾನ್ ಇವರನ್ನೂ ಕರೆಯಿಸಿದೆ; ಕಾಸಿಫ್ಯ ಊರಿನ ಮುಖ್ಯಸ್ಥನಾದ ಇದ್ದೋವಿನ ಬಳಿಗೆ ಹೋಗಬೇಕೆಂದು ಅಪ್ಪಣೆಮಾಡಿದೆ; ನಮ್ಮ ಬಳಿಗೆ ದೇವಾಲಯ ಸೇವಕರನ್ನು ಕಳುಹಿಸುವ ಹಾಗೆ ಅವರು ಇದ್ದೋವಿಗೂ ಕಾಸಿಫ್ಯ ಊರಿನಲ್ಲಿ ವಾಸಿಸುತ್ತಿದ್ದ ಅವನ ಸಹೋದರರಾದ ದೇವಸ್ಥಾನ ಪರಿಚಾರಕ ವರ್ಗದವರಿಗೂ ಹೇಳತಕ್ಕ ಮಾತುಗಳನ್ನು ಹೇಳಿಕೊಟ್ಟೆ. ಆ ಊರಿನವರು ಪರಿಚಾರಕ ವರ್ಗದವರಾಗಿದ್ದರು.
18 : ನಮ್ಮ ದೇವರ ಕೃಪಾಹಸ್ತ ನಮ್ಮ ಮೇಲೆ ಇದ್ದುದರಿಂದ ಅವರು ಇಸ್ರಯೇಲನ ಮಗ ಲೇವಿಯ ಕುಲದ ಮಹ್ಲೀ ಸಂತಾನದವರಲ್ಲಿ ಈಸ್ಸೆಕೆಲನನ್ನು, ಶೇರೇಬ್ಯನನ್ನು, ಅವನ ಪುತ್ರ ಭ್ರಾತೃಗಳಲ್ಲಿ ಹದಿನೆಂಟು ಮಂದಿಯನ್ನು,
19 : ಮೆರಾರೀಯರಲ್ಲಿ ಹಷಭ್ಯನನ್ನು, ಅವನೊಡನೆ ಯೆಶಾಯನನ್ನು, ಅವನ ಪುತ್ರ ಭ್ರಾತೃಗಳಲ್ಲಿ ಇಪ್ಪತ್ತು ಮಂದಿಯನ್ನು,
20 : ಹಾಗು ದಾವೀದನೂ ಅವನ ಸರದಾರರೂ ಲೇವಿಯರ ಸಹಾಯಕ್ಕಾಗಿ ಕೊಟ್ಟ ದೇವಸ್ಥಾನ ಪರಿಚಾರಕರಲ್ಲಿ ಇನ್ನೂರ ಇಪ್ಪತ್ತು ಮಂದಿಯನ್ನು ನಮ್ಮ ಬಳಿಗೆ ಕರೆದುಕೊಂಡು ಬಂದರು. ಇವರೆಲ್ಲರ ಹೆಸರುಗಳು ಪಟ್ಟಿಯಲ್ಲಿದ್ದವು.
21 : ಆಮೇಲೆ ಆ ಅಹವಾ ನದಿಯ ಬಳಿಯಲ್ಲಿ, ನಾವು ಉಪವಾಸದಿಂದಿದ್ದು ನಮ್ಮ ದೇವರ ಮುಂದೆ ನಮ್ಮನ್ನೇ ತಗ್ಗಿಸಿಕೊಂಡು, ನಮಗೂ ನಮ್ಮ ಮನೆಯವರಿಗೂ ನಮ್ಮ ಎಲ್ಲ ಆಸ್ತಿಗೂ ಪ್ರಯಾಣದಲ್ಲಿ ಶುಭವನ್ನು ಕೋರಬೇಕೆಂದು ಪ್ರಕಟಿಸಿದೆ.
22 : ನಮ್ಮ ದೇವರ ಕೃಪಾಹಸ್ತ ಅವರ ಎಲ್ಲ ಶರಣಾರ್ಥಿಗಳ ಮೇಲಿತ್ತು. ನಮ್ಮ ದೇವರನ್ನು ತೊರೆದುಬಿಟ್ಟವರೆಲ್ಲರು ಅವರ ಪ್ರಬಲವಾದ ರೌದ್ರಕ್ಕೆ ಗುರಿಯಾಗುವರು ಎಂದು ನಾವು ಅರಸನ ಮುಂದೆ ಹೇಳಿದ್ದೇವು. ಆದುದರಿಂದದ ದಾರಿಯಲ್ಲಿ ನಮ್ಮನ್ನು ಶತ್ರುಗಳಿಂದ ರಕ್ಷಿಸುವುದಕ್ಕಾಗಿ ಸೈನ್ಯವನ್ನಾಗಲಿ, ಅಶ್ವಬಲವನ್ನಾಗಲಿ ಕೇಳಿಕೊಳ್ಳುವುದಕ್ಕೆ ನಾನು ನಾಚಿಕೊಂಡಿದ್ದೆ.
23 : ನಾವು ಈ ಕಾರಣ ಉಪವಾಸಮಾಡಿ ದೇವರನ್ನು ಪ್ರಾರ್ಥಿಸಿದೆವು; ಅವರು ನಮಗೆ ಪ್ರಸನ್ನರಾದರು.
24 : ಅನಂತರ ನಾನು ಯಾಜಕರ ಮುಖ್ಯಸ್ಥರಿಂದ ಶೇರೇಬ್ಯನನ್ನೂ ಹಷಬ್ಯನನ್ನೂ ಇವರ ಸಹೋದರರಲ್ಲಿ ಹತ್ತು ಮಂದಿಯನ್ನೂ ಆರಿಸಿಕೊಂಡೆ.
25 : ಅರಸನಿಂದಲು, ಅವನ ಮಂತ್ರಿಗಳಿಂದಲು, ಪದಾಧಿಕಾರಿಗಳಿಂದಲು, ಅಲ್ಲಿದ್ದ ಎಲ್ಲ ಇಸ್ರಯೇಲರಿಂದಲು ನಮ್ಮ ದೇವರ ಆಲಯಕ್ಕೆ ಕಾಣಿಕೆಯಾಗಿ ಕೊಡಲಾಗಿದ್ದ ಬೆಳ್ಳಿ ಬಂಗಾರವನ್ನು ಹಾಗು ಸಾಮಾಗ್ರಿಗಳನ್ನು ತೂಕಮಾಡಿ ಅವರಿಗೆ ಒಪ್ಪಿಸಿದೆ.
26 : ಅವರ ಕೈಗೆ ಕೊಟ್ಟ ಸಾಮಾನುಗಳ ತೂಕ: ಬೆಳ್ಳಿ 22 ಮೆಟ್ಟಿಕ್ ಟನ್; ಬೆಳ್ಳಿಯ ನೂರು ಸಾಮಾಗ್ರಿಗಳ ತೂಕ 70 ಕಿಲೋಗ್ರಾಂ; ಬಂಗಾರ 3400 ಕಿಲೋಗ್ರಾಂ.
27 : ಬಂಗಾರದ ಇಪ್ಪತ್ತು ಬಟ್ಟಲುಗಳು ಪ್ರತಿಯೊಂದೂ 8.4 ಕಿಲೋಗ್ರಾಂ; ಇವುಗಳಲ್ಲದೆ ಶ್ರೇಷ್ಠವಾದ ಕಂಚಿನ ಎರಡು ಪಾತ್ರೆಗಳಿದ್ದವು. ಅವು ಬಂಗಾರದಷ್ಟು ಬೆಲೆಯುಳ್ಳವುಗಳು.
28 : ನಾನು ಅವರಿಗೆ, ‘ನೀವು ಸರ್ವೇಶ್ವರನ ಸ್ವಕೀಯರು; ಆ ಪಾತ್ರೆಗಳು ಕೂಡ ದೇವರ ವಸ್ತುಗಳು; ಆ ಬೆಳ್ಳಿಬಂಗಾರ ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರನಿಗೆ ಸಮರ್ಪಿತವಾದ ಕಾಣಿಕೆ.
29 : ಆದುದರಿಂದ ನೀವು ಜಾಗರೂಕರಾಗಿ ಇದ್ದು ಜೆರುಸಲೇಮಿನಲ್ಲಿರುವ ಯಾಜಕರ ಮತ್ತು ಲೇವಿಯರ ಮುಖ್ಯಸ್ಥರ ಮುಂದೆ ಹಾಗು ಇಸ್ರಯೇಲ್ ಗೋತ್ರಪ್ರಧಾನರ ಮುಂದೆ ಇವುಗಳನ್ನು ತೂಕಮಾಡಿ ಸರ್ವೇಶ್ವರನ ಆಲಯದ ಕೊಠಡಿಗಳಲ್ಲಿಡುವವರೆಗೂ ಎಚ್ಚರಿಕೆಯಿಂದ ನೋಡಿಕೊಳ್ಳಿ’ ಎಂದು ಹೇಳಿದೆ.
30 : ಆ ಯಾಜಕರು ಹಾಗು ಲೇವಿಯರು ಜೆರುಸಲೇಮಿನ ದೇವಾಲಯಕ್ಕೆ ತಲುಪಿಸುವ ಉದ್ದೇಶದಿಂದ ಆ ಬೆಳ್ಳಿಬಂಗಾರವನ್ನೂ ಉಪಕರಣಗಳನ್ನೂ ತೂಕಮಾಡಿಸಿ ತಮ್ಮ ವಶದಲ್ಲಿ ಇಟ್ಟುಕೊಂಡರು.
31 : ನಾವು ಮೊದಲನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಅಹವಾ ನದಿಯನ್ನು ಬಿಟ್ಟು ಜೆರುಸಲೇಮಿಗೆ ಹೊರಟೆವು. ನಮ್ಮ ದೇವರ ಕೃಪಾಹಸ್ತ ನಮ್ಮನ್ನು ಪಾಲಿಸುತ್ತಾ ಇತ್ತು. ಶತ್ರುಗಳ ಹಾಗು ದಾರಿಯಲ್ಲಿ ಹೊಂಚುಹಾಕುವವರ ಕೈಗೆ ಸಿಕ್ಕದಂತೆ ಅವರು ನಮ್ಮನ್ನು ಪಾರುಮಾಡಿದರು.
32 : ನಾವು ಜೆರುಸಲೇಮನ್ನು ಸೇರಿ ಮೂರು ದಿವಸ ವಿಶ್ರಮಿಸಿಕೊಂಡೆವು.
33 : ನಾಲ್ಕನೆಯ ದಿನ ನಮ್ಮ ದೇವರ ಆಲಯದಲ್ಲಿ ಊರೀಯನ ಮಗ ಮೆರೇಮೋತ್ ಎಂಬ ಯಾಜಕನಿಗೆ ಬೆಳ್ಳಿಬಂಗಾರವನ್ನೂ ಉಪಕರಣಗಳನ್ನೂ ತೂಕಮಾಡಿ ಒಂದೊಂದಾಗಿ ಎಣಿಸಿಕೊಟ್ಟೆವು. ಫೀನೆಹಾಸನ ವಂಶದವನಾದ ಎಲ್ಲಾಜಾರ್, ಯೇಷೂವನ ಮಗ ಯೋಜಾಬಾದ್, ಬಿನ್ನೂಯನ ಮಗ ನೋವದ್ಯ ಎಂಬ ಲೇವಿಯರು ಅವನ ಜೊತೆಯಲ್ಲಿದ್ದರು.
34 : ಎಲ್ಲವುಗಳ ತೂಕ ತಕ್ಷಣವೇ ಲಿಖಿತವಾಯಿತು.
35 : ದೇಶಾಂತರದ ಸೆರೆಯಿಂದ ಮರಳಿ ಬಂದವರು ಇಸ್ರಯೇಲ್ ದೇವರಿಗೆ ತೊಂಬತ್ತಾರು ಟಗರುಗಳನ್ನು, ಎಪ್ಪತ್ತೇಳು ಕುರಿಮರಿಗಳನ್ನು, ಸಮಸ್ತ ಇಸ್ರಯೇಲರ ಪರವಾಗಿ ಹನ್ನೆರಡು ಹೋರಿಗಳನ್ನು ಹಾಗು ದೋಷಪರಿಹಾರಾರ್ಥವಾಗಿ ಹನ್ನೆರಡು ಹೋತಗಳನ್ನು ದಹನಬಲಿಗಾಗಿ ಸಮರ್ಪಿಸಿದರು. ಅಂತೆಯೇ ಇವೆಲ್ಲವೂ ಸರ್ವೇಶ್ವರನಿಗೆ ದಹನಬಲಿಯಾಗಿ ಸಮರ್ಪಿತವಾದುವು.
36 : ಆಮೇಲೆ ಅವರು ರಾಜಶಾಸನವನ್ನು ರಾಜೋದ್ಯೋಗಸ್ಥರಿಗೂ ನದಿಯಾಚೆಯ ರಾಜ್ಯಪಾಲರಿಗೂ ಒಪ್ಪಿಸಿದರು. ಅಂದಿನಿಂದ ಆ ಅಧಿಕಾರಿಗಳು ಜನರಿಗೂ ದೇವಾಲಯಕ್ಕೂ ಸಹಾಯಮಾಡಿದರು.

Holydivine