- 1
- 2
- 3
- 4
- 5
- 6
- 7
- 8
- 9
- 10
- 11
- 12
- 13
- 14
- 15
- 16
- 17
- 18
- 19
- 20
- 21
- 22
- 23
- 24
- 25
- 26
- 27
- 28
- 29
- 30
- 31
- 32
- 33
- 34
- 35
- 36
- 37
- 38
- 39
- 40
- 41
- 42
- 43
- 44
- 45
- 46
- 47
- 48
- 49
- 50
- 51
- 52
- 53
- 54
- 55
- 56
- 57
- 58
- 59
- 60
- 61
- 62
- 63
- 64
- 65
- 66
Isaiah - Chapter 16
1 : ಕಳುಹಿಸಿ ಕುರಿಗಳನು ಕಪ್ಪಕಾಣಿಕೆ ಯಾಗಿ ದೇಶಾಧಿಪತಿಗೆ, ಕಳುಹಿಸಿ ಮರುಭೂಮಿಯ ಸೆಲಾದಿಂದ ಸಿಯೋನ್ ಪರ್ವತಕೆ.
2 : ಮೋವಾಬಿನ ಮಹಿಳೆಯರು ಅರ್ನೊನ್ ನದಿಯ ಹಾಯ್ಗಡಗಳಲಿ, ಅಲೆಯುತಿಹರು ಗೂಡಿಂದ ಹೊರದೂಡಲಾದ ಹಕ್ಕಿ ಮರಿಗಳ ಪರಿ.
3 : ಇಂತೆನ್ನುವರವರು ಯೆಹೂದ ಜನತೆಗೆ: “ನೀಡಿ ಸಲಹೆಯೊಂದನ್ನು ನಮಗೆ, ಕೊಡಿ ನ್ಯಾಯ ತೀರ್ಪನೆಮಗೆ, ಇರುಳಿನಂತಿರಲಿ ನಿಮ್ಮ ನೆರಳು ಉರಿಬಿಸಿಲೊಳೆಮಗೆ, ನೆಲೆನೀಡಿ ವಲಸಿಗರಿಗೆ, ದೂಡಬೇಡಿ ಅಲೆಯುವವರನು ಬಯಲಿಗೆ.
4 : ನೆಲೆನೀಡಿ ಮೋವಾಬ್ ನಾಡಿನಿಂದ ವಲಸೆಬಂದಿಹ ನಮಗೆ, ವಿನಾಶಕರಿಗೆ ವಶವಾಗದಂತೆ ಆಶ್ರಯ ನೀಡಿ ನಮಗೆ. ನಾಡಿನಿಂದ ನಿರ್ಮೂಲವಾಗುವರು ವಿಧ್ವಂಸಕರು, ನಿಂತು ಹೋಗುವುವು ನಾಶವಿನಾಶಗಳು, ಅಳಿದುಹೋಗುವರು ತುಳಿದು ಹಾಳುಮಾಡುವವರು.
5 : ಸ್ಥಾಪಿತವಾಗುವುದಾಗ ಅಚಲ ಒಲವಿನ ಸಿಂಹಾಸನವು, ಅದನಲಂಕರಿಸುವನು ಪ್ರಾಮಾಣಿಕ ದಾವೀದ ವಂಶಜನು. ದೊರಕಿಸುವನಾತ ನ್ಯಾಯ ನೀತಿಯನು, ಶೀಘ್ರದಲೆ ನೆರವೇರಿಸುವನು ಸರಿಕಂಡದುದನು.”
6 : ಯೆಹೂದ ಜನತೆ ಪೇಳ್ವರವರಿಗೆ: “ನಮ್ಮ ಕಿವಿಗೆ ಬಿದ್ದಿದೆ ಮೋವಾಬ್ಯರ ಮದ, ತಿಳಿದಿದೆ ನಮಗೆ ಅವರ ದುರಹಂಕಾರ, ಅವರ ಒಣ ಡಂಭಾಚಾರ, ಗರ್ವೋದ್ರೇಕ”.
7 : ಇದಕಾರಣ ಮೋವಾಬ್ಯರೇ ಗೋಳಾಡಲಿ, ಪ್ರಲಾಪಿಸಲಿ ಪ್ರತಿಯೊಬ್ಬನು ಮೋವಾಬಿಗಾಗಿ, ಕೀರ್ ಹರೆಷೆಥಿನ ದೀಪದ್ರಾಕ್ಷಿಯ ಕಡುಬಿಗಾಗಿ, ನೆನೆದು ನರಳಿ ಹಲುಬಲಿ ಅದಕ್ಕಾಗಿ.
8 : ನಿಸ್ಸಾರವಾಗಿದೆ ಹೆಷ್ಬೋನಿನ ಹೊಲ, ಸಿಬ್ಮದ ದ್ರಾಕ್ಷಾಲತೆ, ಒಮ್ಮೆ ವ್ಯಾಪಿಸಿತ್ತು ಆ ರಾಜ್ಯದ್ರಾಕ್ಷಿ ಯಜ್ಜೇರಿನವರೆಗೆ, ಹಬ್ಬಿತ್ತದರ ಶಾಖೆ ಮರುಭೂಮಿಗೆ, ಸಮುದ್ರದಾಚೆ, ಮಾಡಿತು ನಾಡಿನೊಡೆಯರನು ಕುಡಿದು ಮತ್ತರಾಗುವಂತೆ.
9 : ಎಂದೇ ಸಿಬ್ಮದ ದ್ರಾಕ್ಷಾಲತೆಯ ನಿಮಿತ್ತ, ಕಣ್ಣೀರಿಡುವೆನು ಯಜ್ಜೇರಿನವರ ಸಮೇತ, ತೋಯಿಸುತಿಹೆನು ಹೆಷ್ಬೋನನು, ಎಲ್ಲಾನನು ಕಣ್ಣೀರಿಂದ, ಏಕೆನೆ ಇಲ್ಲವಾಗಿದೆ ಅಲ್ಲಿ ಹಣ್ಣುಹಂಪಲು ಸುಗ್ಗಿಯ ಗೀತ.
10 : ತೊಲಗಿದೆ ಹೊಲಗಳಿಂದ ಹರ್ಷಾನಂದ, ಇಲ್ಲವಾಗಿದೆ ತೋಟಗಳಲಿ ಜಯಕಾರದ ನಾದ, ದ್ರಾಕ್ಷಾರಸವನು ತೆಗೆವವರಿಲ್ಲ ಅರಮನೆಗಳಿಂದ, ಎಂತಲೆ ನಿಂತು ಹೋಗಿಹುದಲ್ಲಿ ಸುಗ್ಗಿಯ ಗೀತ.
11 : ಮೋವಾಬಿನ ನಿಮಿತ್ತ ಮಿಡಿಯುತಿದೆಯೆನ್ನ ಮನ ದುಃಖದಿಂದ, ವೀಣೆಯ ತಂತಿಯಂತೆ ತುಡಿಯುತಿದೆಯೆನ್ನ ಅಂತರಂಗ ಕೀರ್ ಹೆರೆಷಿನ ನಿಮಿತ್ತ.
12 : ವ್ಯರ್ಥ, ಬೆಟ್ಟಗುಡ್ಡಗಳಿಗೆ ಮೋವಾಬ್ಯರು ತೀರ್ಥಯಾತ್ರೆಗೈದರೂ, ವ್ಯರ್ಥ, ಪ್ರಾರ್ಥನೆ ಮಾಡಲು ಅವರು ಗರ್ಭಗುಡಿಗೆ ಹೋದರೂ.
13 : ಮೋವಾಬ್ಯರ ವಿಷಯವಾಗಿ ಸರ್ವೇಶ್ವರ ಹಿಂದೆ ನುಡಿದ ದೇವೋಕ್ತಿಯಿದೇ:
14 : ಸರ್ವೇಶ್ವರ ಇಂತೆನ್ನುತ್ತಾರೆ: “ಗುಲಾಮಗಿರಿಯ ಕಟ್ಟುನಿಟ್ಟಿನ ಲೆಕ್ಕಾಚಾರದಂತೆ, ಮೂರು ವರ್ಷದೊಳಗೆ ಮೋವಾಬಿನ ವೈಭವವು ಹೀನಾಯಕ್ಕೆ ಈಡಾಗುವುದು. ಅಲ್ಲಿನವರ ಅಗಣ್ಯ ಜನ ಸಂಖ್ಯೆಯಲ್ಲಿ ಅಳಿದುಳಿಯುವವರು ಕೆಲವೇ ದುರ್ಬಲರು”.