- 1
- 2
- 3
- 4
- 5
- 6
- 7
- 8
- 9
- 10
- 11
- 12
- 13
- 14
- 15
- 16
- 17
- 18
- 19
- 20
- 21
- 22
- 23
- 24
- 25
- 26
- 27
- 28
- 29
- 30
- 31
- 32
- 33
- 34
- 35
- 36
- 37
- 38
- 39
- 40
- 41
- 42
- 43
- 44
- 45
- 46
- 47
- 48
- 49
- 50
- 51
- 52
- 53
- 54
- 55
- 56
- 57
- 58
- 59
- 60
- 61
- 62
- 63
- 64
- 65
- 66
Isaiah - Chapter 18
1 : ಎಥಿಯೋಪಿಯದ ನದಿಗಳಾಚೆ ಇರುವ ಸೀಮೆಗೆ ಧಿಕ್ಕಾರ! ರೆಕ್ಕೆಗಳನ್ನು ಪಟಪಟನೆ ಬಡಿಯುವ ಮಿಡತೆಗಳಿಂದ ಕೂಡಿರುವ ನಾಡಿಗೆ ಧಿಕ್ಕಾರ!
2 : ಜೊಂಡು ಮರದ ದೋಣಿಗಳಲ್ಲಿ ನೈಲುನದಿಯ ಮಾರ್ಗವಾಗಿ, ರಾಯಭಾರಿಗಳನ್ನು ಕಳುಹಿಸುವ ಆ ದೇಶಕ್ಕೆ ಧಿಕ್ಕಾರ! ಶೀಘ್ರವಾಗಿ ಬರುತ್ತಿರುವ ದೂತರೇ, ಮೈಕಟ್ಟುಳ್ಳ, ಸರ್ವರಿಗೂ ಭಯಪ್ರದರಾಗಿರುವ, ಪ್ರಬಲ ಆಕ್ರವ್ಮಣಕಾರಿಗಳೂ ಆದ, ನದಿಗಳಿಂದ ಸೀಳಿಹೋಗಿರುವ ರಾಷ್ಟ್ರದವರ ಬಳಿಗೆ ತೆರಳಿ.
3 : ಸಮಸ್ತ ಭೂನಿವಾಸಿಗಳೇ, ಜಗದ ಸಕಲ ಜನಾಂಗಗಳೇ, ಕೇಳಿ: ಬೆಟ್ಟಗಳ ಮೇಲೆ ಧ್ವಜಾರೋಹಣ ಮಾಡುವಾಗ ಕಣ್ಣಿಟ್ಟು ನೋಡಿ, ತುತೂರಿಯನ್ನು ಊದುವಾಗ ಕಿವಿಗೊಟ್ಟು ಕೇಳಿ,
4 : ಸರ್ವೇಶ್ವರ ನನಗೆ ಹೀಗೆಂದು ಹೇಳಿದ್ದಾರೆ: “ಬಿಸಿಹಗಲಿನ ಸೂರ್ಯನಂತೆ, ಕೊಯಿಲುಗಾಲದಲ್ಲಿರುವ ಮಂಜಿನಂತೆ, ನಾನು ನನ್ನ ನಿವಾಸ ಸ್ಥಾನದಿಂದ ಸುಮ್ಮನೆ ನೋಡುತ್ತಿರುವೆನು.”
5 : ಗಿಡದಲ್ಲಿ ಮೊಗ್ಗು ಕಚ್ಚಿ, ಹೂ ಅರಳಿ, ಹೀಚು ದೋರೆಗಾಯಿಯಾಗುತ್ತಿರುವಾಗ, ಕೊಯಿಲು ಕಾಲಕ್ಕೆ ಮುಂಚೆಯೇ ಅದರ ಕೊಂಬೆಗಳನ್ನೂ ಕವಲುಗಳನ್ನೂ ಶತ್ರುಗಳು ಕತ್ತರಿಸಿ ಹಾಕುವರು.
6 : ಹೀಗೆ ಕಡಿಯಲ್ಪಟ್ಟವರ ಶವಗಳೆಲ್ಲ ರಣಹದ್ದುಗಳ ಮತ್ತು ಕಾಡುಮೃಗಗಳ ಪಾಲಾಗುವುವು; ಪಕ್ಷಿಗಳಿಗೆ ಬೇಸಿಗೆಯ ಆಹಾರವಾಗುವುವು, ಪ್ರಾಣಿಗಳಿಗೆ ಚಳಿಗಾಲದ ಉಣಿಸಾಗುವುವು.
7 : ಆಗ ಎತ್ತರವಾದ, ನುಣುಪಾದ ಮೈಕಟ್ಟುಳ್ಳ, ಸರ್ವರಿಗೂ ಭಯಪ್ರದರಾದ, ಪ್ರಬಲ ಆಕ್ರಮಣಕಾರಿಗಳಾದ, ನದಿಗಳಿಂದ ಸೀಳಿಹೋಗಿರುವ ರಾಷ್ಟ್ರದವರು ಸರ್ವೇಶ್ವರಸ್ವಾಮಿಯ ಹೆಸರಾಂತ ಸಿಯೋನ್ ಪರ್ವತಕ್ಕೆ ಬರುವರು. ಸೇನಾಧೀಶ್ವರ ಸರ್ವೇಶ್ವರ ಅವರಿಂದ ಕಾಣಿಕೆಗಳನ್ನು ಸ್ವೀಕರಿಸುವರು.