- 1
- 2
- 3
- 4
- 5
- 6
- 7
- 8
- 9
- 10
- 11
- 12
- 13
- 14
- 15
- 16
- 17
- 18
- 19
- 20
- 21
- 22
- 23
- 24
- 25
- 26
- 27
- 28
- 29
- 30
- 31
- 32
- 33
- 34
- 35
- 36
- 37
- 38
- 39
- 40
- 41
- 42
- 43
- 44
- 45
- 46
- 47
- 48
- 49
- 50
- 51
- 52
- 53
- 54
- 55
- 56
- 57
- 58
- 59
- 60
- 61
- 62
- 63
- 64
- 65
- 66
Isaiah - Chapter 39
1 : ಅದೇ ಕಾಲದಲ್ಲಿ ಬಲದಾನನ ಮಗನು ಹಾಗೂ ಬಾಬಿಲೋನಿಯದ ಅರಸನು ಆದ ಮೆರೋದಕಬಲದಾನ ಎಂಬವನು, ರಾಜ ಹಿಜ್ಕೀಯನು ರೋಗದಿಂದ ಗುಣಹೊಂದಿದನು ಎಂದು ಕೇಳಿ ಅವನಿಗೆ ಉಡುಗೊರೆಯೊಂದಿಗೆ ಒಂದು ಪತ್ರವನ್ನು ಕಳುಹಿಸಿದನು.
2 : ಹಿಜ್ಕೀಯನು ಆ ದೂತರನ್ನು ಸಂತೋಷದಿಂದ ಬರಮಾಡಿಕೊಂಡು ಅವರಿಗೆ ಬಳ್ಳಿಬಂಗಾರ, ಸುಗಂಧದ್ರವ್ಯ, ಪರಿಮಳತೈಲ ಮೊದಲಾದ ಪದಾರ್ಥಗಳಿಂದ ಕೂಡಿದ ಕರಂಡಗಳನ್ನು, ಆಯುಧ ಶಾಲೆಯನ್ನು ಮತ್ತು ತನ್ನ ಭಂಡಾರದಲ್ಲಿದ್ದ ಒಡವೆವಸ್ತುಗಳನ್ನು ತೋರಿಸಿದನು. ಅವನ ಅರಮನೆಯಲ್ಲೂ ರಾಜ್ಯದಲ್ಲೂ ಇದ್ದ ಸಮಸ್ತವನ್ನು ತೋರಿಸಿದನು.
3 : ಆಗ ಪ್ರವಾದಿ ಯೆಶಾಯನು ಹಿಜ್ಕೀಯನ ಬಳಿಗೆ ಬಂದು, “ಆ ದೂತರು ಎಲ್ಲಿಯವರು? ಏನು ಕೇಳಿದರು?” ಎಂದನು. ಅದಕ್ಕೆ ಹಿಜ್ಕೀಯನು, “ಅವರು ಬಹುದೂರದ ನಾಡಾದ ಬಾಬಿಲೋನಿಯದಿಂದ ಬಂದವರು,” ಎಂದು ಉತ್ತರಕೊಟ್ಟನು.
4 : ಯೆಶಾಯನು ಮತ್ತೆ ಅವನನ್ನು, “ಅವರು ನಿನ್ನ ಅರಮನೆಯಲ್ಲಿ ಏನೇನನ್ನು ನೋಡಿದರು?” ಎಂದು ಕೇಳಲು ಹಿಜ್ಕೀಯನು, “ಅರಮನೆಯಲ್ಲಿ ಇರುವುದೆಲ್ಲವನ್ನು ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದ ಒಡವೆ ವಸ್ತು ಒಂದೂ ಇಲ್ಲ,” ಎಂದನು.
5 : ಆಗ ಯೆಶಾಯನು ಅವನಿಗೆ, “ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ಈ ಮಾತನ್ನು ಕೇಳು:
6 : ನಿನ್ನ ಪೂರ್ವಜರ ಕಾಲದಿಂದ ಇಂದಿನವರೆಗೆ ಅರಮನೆಯಲ್ಲಿ ಕೂಡಿಸಿಟ್ಟ ಎಲ್ಲವನ್ನು ಬಾಬಿಲೋನಿಯಾಗೆ ಕೊಂಡೊಯ್ಯುವ ದಿನ ಬರುವುದು; ಇಲ್ಲಿ ಏನೂ ಉಳಿಯುವುದಿಲ್ಲ.
7 : ನೀನು ಪಡೆದ ಮಕ್ಕಳಲ್ಲಿ ಕೆಲವರನ್ನು, ನಿನ್ನ ಸ್ವಂತ ಪುತ್ರರನ್ನು ತೆಗೆದುಕೊಂಡು ಹೋಗಿ ಬಾಬಿಲೋನಿಯರ ಅರಸರ ಅರಮನೆಯಲ್ಲಿ ಕಂಚುಕಿಗಳನ್ನಾಗಿ ನೇಮಿಸಿಕೊಳ್ಳುವರು,” ಎಂದು ಹೇಳಿದನು.
8 : ಆಗ ರಾಜ ಹಿಜ್ಕೀಯನು ಹೇಗೂ ತನ್ನ ಜೀವಮಾನದಲ್ಲಿ ಶಾಂತಿ ಸೌಭಾಗ್ಯ ಇರುವುದೆಂದು ತಿಳಿದುಕೊಂಡು ಯೆಶಾಯನಿಗೆ, “ನೀನು ತಿಳಿಸಿದ ಸರ್ವೇಶ್ವರಸ್ವಾಮಿಯ ಮಾತು ಹಿತಕರವಾದುದು,” ಎಂದು ಉತ್ತರಕೊಟ್ಟನು.