Joshua - Chapter 17
Holy Bible

1 : ಜೋಸೆಫನ ಚೊಚ್ಚಲ ಮಗ ಮನಸ್ಸೆಯ ವಂಶದವರಿಗೆ ದೊರಕಿದ ಸೊತ್ತಿನ ವಿವರ ಇದು: ಮನಸ್ಸೆಯ ಹಿರಿಯ ಮಗನೂ ಗಿಲ್ಯಾದನ ತಂದೆಯೂ ಆದ ಮಾಕೀರನು ಯುದ್ಧವೀರನು. ಆದ್ದರಿಂದ ಅವನಿಗೆ ಗಿಲ್ಯಾದ, ಬಾಷಾನ ಎಂಬ ಪ್ರಾಂತ್ಯಗಳು ಸಿಕ್ಕಿದವು.
2 : ಜೋಸೆಫನ ಮಗ ಮನಸ್ಸೆಯ ಉಳಿದ ಗಂಡು ಮಕ್ಕಳಾದ ಅಬೀಯೆಜೆರ್, ಹೇಲೆಕ್, ಅಸ್ರೀಯೇಲ್, ಶೆಕೆಮ್, ಹೇಫೆರ್, ಶವಿೂದಾ, ಎಂಬವರ ವಂಶದವರಿಗೆ ಜೋರ್ಡನಿನ ಈಚೆಕಡೆ ಪಾಲು ಸಿಕ್ಕಿತು.
3 : ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನೂ ಆದ ಚಲ್ಪಹಾದನಿಗೆ ಹೆಣ್ಣು ಮಕ್ಕಳು ಹುಟ್ಟಿದರೇ ಹೊರತು ಗಂಡು ಮಕ್ಕಳು ಆಗಲಿಲ್ಲ. ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ ಎಂಬವರು ಅವನ ಹೆಣ್ಣುಮಕ್ಕಳು.
4 : ಇವರು ಮಹಾಯಾಜಕನಾದ ಎಲ್ಲಾಜಾರ್, ನೂನನ ಮಗ ಯೆಹೋಶುವ ಹಾಗೂ ಕುಲಾಧಿಪತಿಗಳ ಬಳಿಗೆ ಬಂದು, “ನಮ್ಮ ಅಣ್ಣತಮ್ಮಂದಿರೊಡನೆ ನಮಗೂ ಪಾಲುಕೊಡಬೇಕೆಂದು ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದ್ದಾರಲ್ಲವೆ?” ಎಂದು ಹೇಳಿದರು. ಯೆಹೋಶುವನು ಸರ್ವೇಶ್ವರನ ಅಪ್ಪಣೆಯಂತೆ ಅವರಿಗೆ ಅವರ ತಂದೆಯ ಅಣ್ಣತಮ್ಮಂದಿರ ಜೊತೆಗೆ ಸೊತ್ತನ್ನು ಪಾಲಾಗಿ ಕೊಟ್ಟನು.
5 : ಮನಸ್ಸೆ ಕುಲದ ಹೆಣ್ಣುಮಕ್ಕಳಿಗೆ ಗಂಡುಮಕ್ಕಳ ಸಮೇತ ಸೊತ್ತು ದೊರಕಿದ್ದರಿಂದ ಮನಸ್ಸೆಯವರಿಗೆ ಜೋರ್ಡನಿನ ಆಚೆಯಿದ್ದ ಬಾಷಾನ್ ಮತ್ತು ಗಿಲ್ಯಾದ್ ಪ್ರಾಂತ್ಯಗಳ ಜೊತೆಗೆ ಈಚೆಯಲ್ಲೂ ಹತ್ತು ಪಾಲು ಸಿಕ್ಕಿದವು.
6 : ಗಿಲ್ಯಾದ್ ನಾಡು ಮನಸ್ಸೆಯ ಉಳಿದ ಗೋತ್ರಗಳಿಗೆ ಸಿಕ್ಕಿತು.
7 : ಮನಸ್ಸೆಯವರ ಸೊತ್ತಿನ ಎಲ್ಲೆ ಆಶೇರ್ ಊರಿನಿಂದ ತೊಡಗಿ ಶೆಕೆಮಿನ ಪೂರ್ವದಲ್ಲಿ ಇರುವ ಮಿಕ್ಮೆತಾತಿನ ಮೇಲೆ ದಕ್ಷಿಣದಲ್ಲಿರುವ ತಪ್ಪೂಹದ ಬುಗ್ಗೆಗೆ ಹೋಗುತ್ತದೆ.
8 : ಮನಸ್ಸೆಯವರ ಸೊತ್ತಿನ ಎಲ್ಲೆ ಆಶೇರ್ ಊರಿನಿಂದ ತೊಡಗಿ ಶೆಕೆಮಿನ ಪೂರ್ವದಲ್ಲಿ ಇರುವ ಮಿಕ್ಮೆತಾತಿನ ಮೇಲೆ ದಕ್ಷಿಣದಲ್ಲಿರುವ ತಪ್ಪೂಹದ ಬುಗ್ಗೆಗೆ ಹೋಗುತ್ತದೆ.
9 : ಅಲ್ಲಿಂದ ಅವರ ಎಲ್ಲೆ ಇಳಿಯುತ್ತಾ ಕಾನಾ ಹಳ್ಳದ ದಕ್ಷಿಣಕ್ಕೆ ಹೋಗುತ್ತದೆ. ಅಲ್ಲಿ ಮನಸ್ಸೆಯವರಿಗೆ ಇರುವಂತೆ ಎಫ್ರಯಿಮ್ಯರಿಗೂ ಕೆಲವು ಪಟ್ಟಣಗಳಿವೆ. ಮನಸ್ಸೆಯವರ ಮುಂದಿನ ಎಲ್ಲೆಯು ಹಳ್ಳದ ಉತ್ತರ ತೀರವನ್ನು ಅನುಸರಿಸಿ ಹೋಗಿ ಸಮುದ್ರದ ದಡದಲ್ಲಿ ಮುಕ್ತಾಯಗೊಳ್ಳುತ್ತದೆ.
10 : ಅಲ್ಲಿಂದ ಅವರ ಎಲ್ಲೆ ಇಳಿಯುತ್ತಾ ಕಾನಾ ಹಳ್ಳದ ದಕ್ಷಿಣಕ್ಕೆ ಹೋಗುತ್ತದೆ. ಅಲ್ಲಿ ಮನಸ್ಸೆಯವರಿಗೆ ಇರುವಂತೆ ಎಫ್ರಯಿಮ್ಯರಿಗೂ ಕೆಲವು ಪಟ್ಟಣಗಳಿವೆ. ಮನಸ್ಸೆಯವರ ಮುಂದಿನ ಎಲ್ಲೆಯು ಹಳ್ಳದ ಉತ್ತರ ತೀರವನ್ನು ಅನುಸರಿಸಿ ಹೋಗಿ ಸಮುದ್ರದ ದಡದಲ್ಲಿ ಮುಕ್ತಾಯಗೊಳ್ಳುತ್ತದೆ.
11 : ಆ ಹಳ್ಳದ ದಕ್ಷಿಣ ತೀರ ಎಫ್ರಯಿಮ್ಯರದು; ಉತ್ತರ ತೀರ ಮನಸ್ಸೆಯವರದು. ಸಮುದ್ರವೇ ಇವರ ಪಶ್ಚಿಮದ ಎಲ್ಲೆ. ಉತ್ತರಕ್ಕೆ ಆಶೇರ ಕುಲದವರ ಪ್ರಾಂತ್ಯವೂ ಪೂರ್ವಕ್ಕೆ ಇಸ್ಸಾಕಾರ್ ಕುಲದವರ ನಾಡೂ ಇರುತ್ತವೆ.
12 : ಆದರೆ ಮನಸ್ಸೆಯವರು ಆ ನಗರಗಳ ನಿವಾಸಿಗಳನ್ನು ಹೊರದೂಡಲಾಗಲಿಲ್ಲ. ಕಾನಾನ್ಯರಿಗೆ ಅಲ್ಲೇ ವಾಸಿಸಲು ಅನುಕೂಲವಾಯಿತು.
13 : ಇಸ್ರಯೇಲರು ಬಲಗೊಂಡ ಮೇಲೂ ಕಾನಾನ್ಯರನ್ನು ಹೊರದೂಡದೆ ಅವರನ್ನು ಜೀತದಾರರನ್ನಾಗಿಸಿಕೊಂಡರು.
14 : ಜೋಸೆಫ್ಯರು ಯೆಹೋಶುವನಿಗೆ, “ನೀವು ಚೀಟು ಹಾಕಿ, ನಮಗೆ ಒಂದೇ ಒಂದು ಭಾಗವನ್ನು ಕೊಟ್ಟಿದ್ದೀರಿ, ಇದು ಸರಿಯೆ? ಸರ್ವೇಶ್ವರಸ್ವಾಮಿ ನಮ್ಮನ್ನು ಇಂದಿನವರೆಗೂ ಆಶೀರ್ವದಿಸಿ ನಮ್ಮನ್ನು ಮಹಾಜನಾಂಗವಾಗಿಸಿದ್ದಾರಲ್ಲವೆ?” ಎಂದು ಕೇಳಿಕೊಂಡರು.
15 : ಅದಕ್ಕೆ ಯೆಹೋಶುವನು, “ಮಹಾ ಜನಾಂಗವಾದ ನಿಮಗೆ ಎಫ್ರಯಿಮ್ ಮಲೆನಾಡು ಸಾಲದಿದ್ದರೆ ಪೆರಿಜ್ಜೀಯರ ಮತ್ತು ರೆಫಾಯರ ನಾಡುಗಳಿಗೆ ಹೋಗಿ ಅಲ್ಲಿನ ಕಾಡು ಕಡಿದು ಸ್ಥಳ ಮಾಡಿಕೊಳ್ಳಿ,” ಎಂದನು.
16 : ಅವರು ಮತ್ತೆ ಯೆಹೋಶುವನಿಗೆ, “ನಮ್ಮ ಮಲೆನಾಡು ನಮಗೆ ಸಾಲುವುದಿಲ್ಲ. ಬೇತ್‍ಷೆಯಾನ್ ಮತ್ತು ಅದಕ್ಕೆ ಸೇರಿದ ಊರುಗಳಿರುವ ಕಣಿವೆಯಲ್ಲೂ ಹಾಗೂ ಇಜ್ರೇಲಿನ ಕಣಿವೆಯಲ್ಲೂ ವಾಸಮಾಡುವ ಕಾನಾನ್ಯರೆಲ್ಲರು ಕಬ್ಬಿಣದ ರಥವುಳ್ಳವರು,” ಎಂದರು.
17 : ಯೆಹೋಶುವನು ಜೋಸೆಫ್ಯರಾದ ಎಫ್ರಯಿಮ್ - ಮನಸ್ಸೆಕುಲದ ಆ ಜನರಿಗೆ, “ನೀವು ಮಹಾಜನಾಂಗ ಹಾಗೂ ಶಕ್ತಿಶಾಲಿಗಳೆಂಬುದೇನೋ ನಿಜ. ನೀವು ಒಂದು ಪಾಲಿಗಿಂತ ಹೆಚ್ಚು ತೆಗೆದುಕೊಳ್ಳಬಹುದಾಗಿದೆ.
18 : ಆ ಮಲೆ ನಾಡನ್ನು ನಿಮಗೆ ಕೊಟ್ಟಿರುತ್ತೇನೆ. ಅದರಲ್ಲಿ ಕಾಡುಗಳಿದ್ದರೂ ನೀವು ಅವುಗಳನ್ನು ಕಡಿದು ಹಾಕಬಹುದು. ಅದಕ್ಕೆ ಸೇರಿರುವ ಬಯಲುಭೂಮಿ ನಿಮ್ಮದೇ ಕಾನಾನ್ಯರು ಬಲಿಷ್ಠರು ಹಾಗೂ ಕಬ್ಬಿಣದ ರಥಗಳುಳ್ಳವರು. ಆದರೂ ನೀವು ಅವರನ್ನು ಹೊರದೂಡಬಲ್ಲಿರಿ,” ಎಂದು ಉತ್ತರ ಕೊಟ್ಟನು.

Holydivine